Notice: Function _load_textdomain_just_in_time was called incorrectly. Translation loading for the arforms-form-builder domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /var/www/vhosts/jpnp.org.in/httpdocs/wp-includes/functions.php on line 6131
ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ (ರಿ.) | ಸ್ವಾಗತ

ಪ್ರತಿಷ್ಠಾನದ ಆಡಳಿತ ಮಂಡಳಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ

ಶೈಕ್ಷಣಿಕ ಕಾರ್ಯಕ್ರಮ

ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ

ಆರೋಗ್ಯಸೇವೆ ಕಾರ್ಯಕ್ರಮ

ಶ್ರೀ ಜೆಪಿ ನಾರಾಯಣಸ್ವಾಮಿ ಪ್ರತಿಷ್ಠಾನ (ರಿ)

ಕೀರ್ತಿಶೇಷ ಶ್ರೀಯುತ ಜೆ.ಪಿ. ನಾರಾಯಣಸ್ವಾಮಿಯವರು ಸಮಾಜದ ಒಳಿತಿಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ನೆಡೆಸಿಕೊಂಡು ಬಂದಿದ್ದರು. ಸಮಾಜದ ಮುಖಂಡರಾಗಿ ಸರ್ವರ ಏಳಿಗೆಗಾಗಿ ಸದಾ ಚಿಂತಿಸುತ್ತ ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದರು . ಅವರ ಅಕಾಲಿಕ ಮರಣ ಸಮಾಜಕ್ಕೆ ಭರಿಸಲಾರದ ನಷ್ಟವನ್ನುಂಟು ಮಾಡಿದೆ. ಜೆ.ಪಿ. ನಾರಾಯಣಸ್ವಾಮಿ ಆಶಯದಂತೆ ಅನೇಕ ಸೌಲಭ್ಯಗಳನ್ನು ಸಮಾಜದ ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ ಹುಟ್ಟುಹಾಕಿದ್ದ ಸಂಸ್ಥೆಯೇ “ಶ್ರೀ ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ (ರಿ.)” ಈಗಾಗಲೇ ನೊಂದಣೆಯಾಗಿದ್ದು , ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿರುತ್ತದೆ.

Founder President message

ನಮ್ಮ ಪೂಜ್ಯ ತಂದೆಯವರಾದ ಶ್ರೀ ಜೆ.ಪಿ. ನಾರಾಯಣಸ್ವಾಮಿ (1952-2017) ಅವರು ಬಡತನದಲ್ಲಿ ಹುಟ್ಟಿದ್ದರೂ ಹೋರಾಟ ನಡೆಸಿ ಆಸ್ತಿ, ಅಂತಸ್ತು, ಶ್ರೀಮಂತ ಪರಿಸರ ದಕ್ಕಿಸಿಕೊಂಡ ಸಾಹಸಿ ಉದ್ಯಮಿ. ಯಶಸ್ವಿ ಉದ್ಯಮಿಯಾಗಿದ್ದರೂ ಬಡಬಗ್ಗರ ಸಂಕಷ್ಟಗಳಿಗೆ ಸ್ಪಂದಿಸುವ ಔದರ‍್ಯ ಅವರದಾಗಿತ್ತು. ವ್ಯವಹಾರದಲ್ಲಿ ವಿಶ್ವಾಸದ ಹೃದಯವಂತಿಕೆ, ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಬೇಕೆಂಬ ತುಡಿತ ಮೊದಲಾದ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅಂತಃಕರಣದ ವ್ಯಕ್ತಿ. ಕರ್ನಾಟಕ ಪ್ರದೇಶ ಅರ‍್ಯ ಈಡಿಗರ ಸಂಘದ ಅಧ್ಯಕ್ಷರಾಗಿ ಜನಾಂಗದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಹಲವಾರು ಶಾಶ್ವತ ಕಾರ್ಯಗಳನ್ನು ರೂಪಿಸಿಕೊಟ್ಟವರು. ಶ್ರೀಸುಧಾ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಅದನ್ನು ಲಾಭದಾಯಕವಾಗುವಂತೆ ಮುನ್ನಡೆಸಿದವರು. ಅವರು ಆತ್ಮವಿಶ್ವಾಸ, ಪರಿಶ್ರಮ, ಸ್ನೇಹಮಯ ತೇಜಸ್ಸಿನ ಪ್ರತೀಕವಾಗಿದ್ದರು. ತಮ್ಮ ೬೫ನೆಯ ವಯಸ್ಸಿನಲ್ಲಿ ಅಕಾಲಿಕವಾಗಿ ಅಗಲಿದ ಜೆಪಿ ಅವರು ಸಮಾಜದ ಬಗ್ಗೆ ತಾಳಿದ್ದ ನೂರಾರು ಕನಸುಗಳನ್ನು ಸಾಕಾರಗೊಳಿಸಲು ಅವರ ಅಭಿಮಾನಿಗಳಿಂದ ಅಸ್ತಿತ್ವಕ್ಕೆ ಬಂದಿದೆ ಶ್ರೀ ಜೆಪಿ ನಾರಾಯಣಸ್ವಾಮಿ ಪ್ರತಿಷ್ಠಾನ.

ಸಮಾಜಕ್ಕಾಗಿ ನಮ್ಮ ಸೇವೆಗಳು

ಕೌಶಲ್ಯಾಭಿವೃದ್ಧಿ

ಶೈಕ್ಷಣಿಕ

ಮಹಿಳೆಯರು ಕಲ್ಯಾಣ

ಆರೋಗ್ಯಸೇವೆ

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ

ಕೌಶಲ್ಯದಲ್ಲಿ ತರಬೇತಿ ಪಡೆದ ಯುವಕರು

ಮಹಿಳಾ ಕಲ್ಯಾಣಕ್ಕಾಗಿ ಖರ್ಚು ಮಾಡಿದ ಮೊತ್ತ

ಪ್ರತಿ ರೋಗಿಗೆ ಚಿಕಿತ್ಸೆಗಾಗಿ ದಾನ

ನಮ್ಮ ವಿಳಾಸ

ಶ್ರೀ ಜೆಪಿ ನಾರಾಯಣಸ್ವಾಮಿ ಪ್ರತಿಷ್ಠಾನ

#219/11, ಬಳ್ಳಾರಿ ರಸ್ತೆ,
ಸದಾಶಿವನಗರ,
ಬೆಂಗಳೂರು - 560 080
ಇಮೇಲ್ : jpnp.trust@gmail.com
ವೆಬ್ಸೈಟ್ : jpnp.org.in